ಅಸ್ವಾಭಾವಿಕ
ಮರಣ ಪ್ರಕರಣ
- ಬ್ರಹ್ಮಾವರ: ದಿನಾಂಕ 18/12/2014 ರಂದು ಬೆಳಿಗ್ಗೆ 11:45 ಗಂಟೆಗೆ ಪಿರ್ಯಾದಿ ಜಯಲಕ್ಷ್ಮೀ ಇವರ ಮಗ ಪ್ರಾಯ 1 ತಿಂಗಳು 22 ದಿನ ಪ್ರಾಯದ ರಂಜನ್ ಗೆ ಬ್ರಹ್ಮಾವರ ಆಸ್ಪತ್ರೆಯಲ್ಲಿ ಚುಚ್ಚುಮದ್ದು ಕೊಡಿಸಿ ನಂತರ ಮನೆಗೆ ಬಂದಿದ್ದು ಮಗು ಆರೋಗ್ಯದಿಂದ ಇದ್ದು ಸಂಜೆ 4:00 ಗಂಟೆಗೆ ಮೈ ತಣ್ಣಗಾಗಿದ್ದು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ಸಂಜೆ 5:30 ಗಂಟೆಗೆ ತಂದಾಗ ಪರೀಕ್ಷಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣಾ ಅಸ್ವಾಭಾವಿಕ ಮರಣ ಪ್ರಕರಣ ಕ್ರಮಾಂಕ 62/14 ಕಲಂ 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಿಸಿ ತನಿಖೆಯಲ್ಲಿರುತ್ತದೆ.
No comments:
Post a Comment