Sunday, February 01, 2015

Daily Crime Reports As on 01/02/2015 at 19:30 Hrs

ಅಸ್ವಾಭಾವಿಕ ಮರಣ ಪ್ರಕರಣ
  • ಕುಂದಾಪುರ: ಪಿರ್ಯಾದುದಾರರಾದ ರಾಜು ಮೊಗವೀರ (45) ತಂದೆ: ಗೋವಿಂದ ಮೊಗವೀರ ವಾಸ: ಅರಸರಬೆಟ್ಟು, ಬೀಜಾಡಿ ಗ್ರಾಮ  ಕುಂದಾಪುರ ತಾಲೂಕು ಎಂಬವರ ಅಣ್ಣ ಮಂಜುನಾಥ ಮೊಗವೀರ ಪ್ರಾಯ 52 ವರ್ಷ ಎಂಬವರು ದಿನಾಂಕ 01.02.2015 ರಂದು ಮಧ್ಯಾಹ್ನ 3:00 ಗಂಟೆಯಿಂದ 4:00 ಗಂಟೆ ನಡುವಿನ ಸಮಯದಲ್ಲಿ ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಪೇಟೆಮನೆ ಮಠದಬೆಟ್ಟು ಎಂಬಲ್ಲಿ ತನ್ನ ವಾಸದ ಮನೆಯ ಜಗುಲಿಯಲ್ಲಿ ಮಾಡಿನ ಪಕ್ಕಾಸಿಗೆ ನೈಲಾನ್‌ ರೋಪ್‌ನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರು ಸುಮಾರು ಎರಡು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ ಎಂಬುದಾಗಿ ರಾಜು ಮೊಗವೀರ ರವರು ನೀಡಿದ ದೂರಿನಂತೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಸಂಖ್ಯೆ 05/2015 ಕಲಂ 174 ಸಿ.ಆರ್.ಪಿ.ಸಿ ಯಂತೆ ಪ್ರಕರಣ ದಾಖಲಿಸಲಾಗಿದೆ.

No comments: