ಅಸ್ವಾಭಾವಿಕ ಮರಣ ಪ್ರಕರಣ
- ಬ್ರಹ್ಮಾವರ: ದಿನಾಂಕ: 22/04/2015 ರಂದು 15:00 ಗಂಟೆಯಿಂದ 18:00 ಗಂಟೆಯ ಮದ್ಯದ ಅವಧಿಯಲ್ಲಿ ಉಡುಪಿ ತಾಲೂಕು ಹನೇಹಳ್ಳಿ ಗ್ರಾಮದ ಕೂರಾಡಿ ಎಂಬಲ್ಲಿ ವೆಂಕಪ್ಪ ಶೆಟ್ಟಿ (ಪ್ರಾಯ: 83 ವರ್ಷ ) ಎಂಬವರು ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ವಿಪರೀತ ರಕ್ತದೊತ್ತಡ, ಸಕ್ಕರೆ ಖಾಯಿಲೆ ಇರುವುದರಿಂದ ಚಿಂತೆಯಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದು ಅಥವಾ ಬೇರೆ ಯಾವುದೋ ಕಾರಣಗಳಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಕೂರಾಡಿಯಲ್ಲಿರುವ ಸೀತಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣಾ ಅಸ್ವಾಭಾವಿಕ ಮರಣ ಕ್ರಮಾಂಕ 21/2015 ಕಲಂ:174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
- ಕೋಟ: ರಮೇಶ ಶೆಟ್ಟಿ (50 ವರ್ಷ) ಎಂಬವರು ಆರ್ಥಿಕ ಮುಗ್ಗಟ್ಟಿನಿಂದ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 22/04/2015 ರಂದು ಸಂಜೆ 5:00 ಗಂಟೆಯಿಂದ ದಿನಾಂಕ 23/04/2015 ರ ಬೆಳಿಗ್ಗೆ 7:30 ಗಂಟೆಯ ಮದ್ಯಾವಧಿಯಲ್ಲಿ ಮೊಳಹಳ್ಳಿ ಗ್ರಾಮದ ಕೋಣಿಹಾರದ ಬಳಿಯಿರುವ ಗೇರು ಪ್ಲ್ಯಾಂಟೇಶನ್ನ ಗೇರು ಮರಕ್ಕೆ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕೋಟ ಠಾಣಾ ಅಸ್ವಾಭಾವಿಕ ಮರಣ ಕ್ರಮಾಂಕ 19/2015 ಕಲಂ:174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment