Thursday, May 21, 2015

Press Note





ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಹಾಯಕ ಅಭಿಯೋಗ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ರಾಜು ಪೂಜಾರಿರವರು ಸರ್ಕಾರಿ ಅಭಿಯೋಜಕರಾಗಿ ಪದೋನ್ನತಿ ಹೊಂದಿ ಮಂಗಳೂರಿನ ಮಾನ್ಯ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದು, ಅವರನ್ನು ಜಿಲ್ಲಾ ಪೊಲೀಸ್‌ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ. ಅಣ್ಣಾಮಲೈ, ಐಪಿಎಸ್, ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾದ ಶ್ರೀ. ಕೆ.ಎಮ್‌. ಚಂದ್ರಶೇಖರ್‌ ಹಾಗೂ ಜಿಲ್ಲಾ ಪೊಲೀಸ್‌ ಕಛೇರಿಯ ಇತರ ಅಧಿಕಾರಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

1 comment:

M Rama Rao said...

'congrats