ಅಪಘಾತ
ಪ್ರಕರಣ
- ಕುಂದಾಪುರ:ದಿನಾಂಕ 27/06/2015 ರಂದು ಸಂಜೆ 4:00 ಗಂಟೆಗೆ ಕುಂದಾಪುರ ತಾಲೂಕು ಕಸಬಾ ಗ್ರಾಮದ ಹಳೆ ಬಸ್ ನಿಲ್ದಾಣದ ಹತ್ತಿರದ ಕಾಮತ್ ರೆಸ್ಟೋರೆಂಟ್ ಬಳಿ ರಸ್ತೆಯಲ್ಲಿ ಶ್ರೀಕಾಂತ ಪೂಜಾರಿ ಎಂಬವರು KA 20 ED 4815 ನೇ ಬೈಕನ್ನು ಕುಂದಾಪುರ ಶಾಸ್ತ್ರಿಸರ್ಕಲ್ ಕಡೆಯಿಂಧ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆ ದಾಟುತ್ತಿದ್ದ ಬಾಬಿ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಬಿ ಹಾಗೂ ಬೈಕ್ ಸವಾರ ಶ್ರೀಕಾಂತ ರಸ್ತೆಯಲ್ಲಿ ಬಿದ್ದು ಗಾಯಗೊಂಡು ಕುಂದಾಪುರ ಚಿನ್ಮಯಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆ ಅಪರಾಧ ಕ್ರಮಾಂಕ 74/2015 ಕಲಂ 279 , 337 ಐಪಿಸಿ ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
No comments:
Post a Comment