ಅಸ್ವಾಭಾವಿಕ ಮರಣ ಪ್ರಕರಣ
- ಕುಂದಾಪುರ: ಪಿರ್ಯಾದಿದಾರರಾದ ಪ್ರಶಾಂತ ಕೆರೆಮನೆ (31), ತಂದೆ: ದಿ. ಲಕ್ಷ್ಮಣ ಪೂಜಾರಿ, ವಾಸ: ಕೆರೆಮನೆ, ನಾನಾ ಸಾಹೇಬ ರೋಡ್, ವಡೇರಹೋಬಳಿ ಗ್ರಾಮ, ಕುಂದಾಪುರ ತಾಲೂಕು ಇವರ ತಮ್ಮ ಶ್ರೀಕಾಂತ (28) ಎಂಬುವವರು ದಿನಾಂಕ 03/09/2015 ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆ ನಡುವಿನ ಸಮಯದಲ್ಲಿ ತನ್ನ ಮನೆಯ ಉಪ್ಪರಿಗೆ ಕೋಣೆಯಲ್ಲಿ ಮಾಡಿನ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯುಡಿಆರ್ ಕ್ರಮಾಂಕ 41/2015 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
No comments:
Post a Comment